ವೇದಗಳನ್ನು ಉದ್ಧರಿಸಿದ (ಮತ್ಸ್ಯಾವತಾರಿ), ಜಗತ್ತನ್ನು ಹೊತ್ತ (ಕೂರ್ಮಾವತಾರಿ), ಭೂಮಿಯನ್ನು ರಕ್ಷಿಸಿದ (ವರಾಹಾವತಾರಿ), ಹಿರಣ್ಯಕಶಿಪುವೆಂಬ ದೈತ್ಯನನ್ನು ಸಿಗಿದ (ನರಸಿಂಹಾವತಾರಿ), ಬಲಿಯನ್ನು ಪಾತಾಳಕ್ಕೆ ತಳ್ಳಿದ (ವಾಮನಾವತಾರಿ), ಕ್ಷತ್ರಿಯರನ್ನು ಸಂಹರಿಸಿದ (ಪರಶುರಾಮಾವತಾರಿ), ರಾವಣನನ್ನು ಜಯಿಸಿದ (ರಾಮಾವತಾರಿ), ಹಲಧರ ಬಲರಾಮನ ಸಹೋದರ (ಕೃಷ್ಣಾವತಾರಿ), ಕಾರುಣ್ಯಮೂರ್ತಿ (ಬೌದ್ಧಾವತಾರಿ) ಮತ್ತು ಮ್ಲೇಚ್ಛರನ್ನು ಬಡಿದೋಡಿಸುವ (ಕಲ್ಕಿ ಅವತಾರಿ) ಕೃಷ್ಣಾ... ನಿನಗೆ ನಮಸ್ಕಾರಗಳು.
|
|
ಪ್ರಥಮ ವಂದಿತ, ಆದಿ ಪೂಜಿತ, ಬುದ್ಧಿ ಪ್ರದಾಯಕ, ಸಿದ್ಧಿ ದಾಯಕ, ಗಣಗಳ ಅಧೀಶ್ವರ, ಚಿಣ್ಣರ ಪ್ರೀತಿಯ ದೇವ, ಮೋದಕ-ಗರಿಕೆ ಪ್ರಿಯ, ವಿಘ್ನ ಹರ ಎಲ್ಲವೂ ಆದ ಶ್ರೀ ಗಣೇಶನ ಚೌತಿ ಉತ್ಸವದ ಸಡಗರಕ್ಕೆ ನಾಡಿಗೆ ನಾಡೇ ಸಿದ್ಧವಾಗಿದೆ. ಈ ವಕ್ರತುಂಡನನ್ನು ಹಾಸ್ಯ ಸಾಹಿತಿಗಳು ಹಲವಾರು ವಕ್ರ ತುಂಡೋಕ್ತಿಗಳ ಮೂಲಕ ಆವಾಹಿಸಿದ್ದಾರೆ, ಸ್ತುತಿಸಿದ್ದಾರೆ, ಭಜಿಸಿದ್ದಾರೆ, ಅರ್ಚಿಸಿದ್ದಾರೆ, ಮೆಚ್ಚಿಸಿದ್ದಾರೆ.
|